ವಿಧಾನಪರಿಷತ್ ಫಲಿತಾಂಶ:~
ಜೆಡಿಎಸ್ಗೆ ನಷ್ಟ, ಅರಳಿದ ಕಮಲ
June 10 2016, ಬೆಂಗಳೂರು,
ಜೂನ್ 10 : ರಾಜ್ಯದ ವಿಧಾನಪರಿಷತ್ ಗೆ ನಡೆದ ಚುನಾವಣೆ ಫಲಿತಾಂಶ ಫಲಿತಾಂಶ ಪ್ರಕಟವಾಗಿದೆ. ವಿಧಾನಸಭೆಯ ಸದಸ್ಯರು ವಿಧಾನಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಬೆಳಗ್ಗೆ ಮತದಾನ ಮಾಡಿದ್ದು ಸಂಜೆಗೆ ಫಲಿತಾಂಶ ಪ್ರಕಟವಾಗಿದೆ. ನಿರೀಕ್ಷೆಯಂತೆ ಕಾಂಗ್ರೆಸ್ ನ, ರಿಜ್ವಾನ್ ಅರ್ಷದ್, ವೀಣಾ ಅಚ್ಚಯ್ಯ, ಅಲ್ಲಂ ವೀರಭದ್ರಪ್ಪ, ಆರ್.ಬಿ.ತಿಮ್ಮಾಪುರ ಜಯಗಳಿಸಿದ್ದಾರೆ. ಬಿಜೆಪಿಯ ವಿ.ಸೋಮಣ್ಣ, ಲೆಹರ್ ಸಿಂಗ್ ಅವರಿಗೂ ವಿಜಯಲಕ್ಷ್ಮೀ ಒಲಿದಿದೆ. ಜೆಡಿಎಸ್ ನಾರಾಯಣ ಸ್ವಾಮಿ ಗೆಲುವಿನ ನಗೆ ಬೀರಿದ್ದು ಮತ್ತೊಬ್ಬ ಅಭ್ಯರ್ಥಿ ಡಾ.ವೆಂಕಟಪತಿ ಅವರಿಗೆ ಸೋಲಾಗಿದೆ.