ಪುಟಗಳು

Thursday, June 23, 2016

ಕನ್ನಡಿಗನಿಗೆ ಒಲಿದ
ಕ್ರಿಕೆಟ್ ಸಾರಥಿ ಪಟ್ಟ:~

ಟಿಂ ಇಂಡಿಯಾದ ನೂತನ ಕೋಚ್ ಆಗಿ ಕನ್ನಡಿಗ ಅನಿಲ್ ಕುಂಬ್ಳೆ ಆಯ್ಕೆ.!!!!

ಧರ್ಮಶಾಲಾ:
ಬಹುನಿರೀಕ್ಷಿತ ಟೀಂ ಇಂಡಿಯಾದ ನೂತನ ಕೋಚ್ ಆಯ್ಕೆ ವಿಚಾರ ಕೊನೆಗೂ ತೆರೆಬಿದ್ದಿದ್ದು,
ಕನ್ನಡಿಗ ಅನಿಲ್ ಕುಂಬ್ಳೆ ಅವರನ್ನೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೇಮಕ ಮಾಡಿದೆ.

ಸಲಹಾ ಸಮಿತಿ ನೀಡಿರುವ ಶಿಫಾರಸ್ಸಿನ ಮೇರೆಗೆ ಧರ್ಮಶಾಲಾದಲ್ಲಿ ಇಂದು ಸಂಜೆ ನಡೆದ ಸಭೆಯಲ್ಲಿ ಬಿಸಿಸಿಐ ಅಧಿಕೃತವಾಗಿ ನೂತನ ಕೋಚ್ ಹೆಸರನ್ನು ಬಹಿರಂಗಪಡಿಸಿದೆ.

ಪ್ರಧಾನ ಕೋಚ್ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆ ಬುಧವಾರ ಪೂರ್ಣಗೊಂಡಿದ್ದು, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ಅವರುಗಳನ್ನೊಳಗೊಂಡ ಸಲಹಾ ಸಮಿತಿ ಕೋಚ್ ಹುದ್ದೆ ಆಕಾಂಕ್ಷಿಗಳ ಸಂದರ್ಶನ ನಡೆಸಿ ಅದರ ವರದಿ ಮತ್ತು ತಮ್ಮ ಶಿಫಾರಸ್ಸನ್ನು ಬಿಸಿಸಿಐಗೆ ಸಲ್ಲಿಸಿದೆ.

ಗುರುವಾರ ಸಂಜೆ ನೂತನ ಕೋಚ್ ಹೆಸರನ್ನು ಅಧಿಕೃತವಾಗಿ ಪ್ರಕಟಿಸುವುದಾಗಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ತಿಳಿಸಿದ್ದರು. ಅಂತೆಯೇ ಇದೀಗ ಬಿಸಿಸಿಐ ಅನಿಲ್ ಕುಂಬ್ಳೆ ಅವರ ಹೆಸರನ್ನು ಬಹಿರಂಗಪಡಿಸಿದೆ. ಈ ಮೂಲಕ ಕುಂಬ್ಳೆ ರವಿಶಾಸ್ತ್ರಿಯನ್ನು ಹಿಂದಿಕ್ಕೆ ಕೋಚ್ ಹುದ್ದೆಗೇರಿದ್ದಾರೆ. ಇಂದಿನಿಂದ 1 ವರ್ಷದವರೆಗೆ ಕುಂಬ್ಳೆ ಭಾರತದ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.