ಪುಟಗಳು

Saturday, June 25, 2016

ಬಿಗ್ ನ್ಯೂಸ್:~

ಬೆಂಗಳೂರು: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ 2015ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದು ಮಾಡಿ ಹೊಸದಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ನಿರ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.ವಿಕಾಸಸೌಧದಲ್ಲಿ ಶುಕ್ರವಾರ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ತಾಂತ್ರಿಕ ಕಾರಣಗಳಿಂದ 2015ರ ನೇಮಕಾತಿ ಅಧಿಸೂಚನೆಯನ್ನು ಇಲಾಖೆಯೇ ತಡೆಹಿಡಿದಿತ್ತು. 2016ರ ಮೇನಲ್ಲಿ ಮತ್ತೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿತ್ತು. ಆದರೆ ಹಿಂದಿನ ಅಧಿಸೂಚನೆಯಲ್ಲಿ ಗೊಂದಲ ಇದ್ದುದರಿಂದ ಇಡೀ ನೇಮಕಾತಿ ಪ್ರಕ್ರಿಯೆ ರದ್ದು ಮಾಡಿ ಹೊಸದಾಗಿ ಅಧಿಸೂಚನೆ ಹೊರಡಿಸಲು ಸೂಚಿಸಲಾಗಿದೆ. ಈ ಪ್ರಕ್ರಿಯೆ ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದರು.