Wikipedia

Search results

Saturday, June 25, 2016

ಶಿಕ್ಷಣ ಕಿರಣ ಯೋಜನೆ ಜಾರಿ:

ಶಾಲೆ ಬಿಡುವ ಮಕ್ಕಳ ಸಂಖ್ಯೆ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಇನ್ಪೋಸಿಸ್ ಪ್ರತಿಷ್ಠಾನದ ಸಹಯೋಗದಲ್ಲಿ ಸ್ಟುಡೆಂಟ್ ಟ್ರ್ಯಾಕಿಂಗ್ ಸಿಸ್ಟಂ ಎಂಬ ಶಿಕ್ಷಣ ಕಿರಣ ಯೋಜನೆ ಜಾರಿಗೆ ತರಲಾಗುತ್ತಿದೆ. ಈ ಯೋಜನೆ ವ್ಯಾಪ್ತಿಗೆ 45 ಲಕ್ಷ ಮಕ್ಕಳು ಒಳಪಡಲಿದ್ದಾರೆ ಎಂದರು.
ಆಧುನಿಕತೆ ಟಚ್: ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಪೈಪೋಟಿ ನೀಡಲು ಸರ್ಕಾರಿ ಶಾಲೆಗಳನ್ನು 21ನೇ ಶತಮಾನಕ್ಕೆ ಅನುಗುಣವಾಗಿ ರೂಪಿಸಲು ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಶೈಕ್ಷಣಿಕ ಗುಣಮಟ್ಟ ಸುಧಾರಣೆಯೂ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರನ್ನು ತರಬೇತಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಶಿಕ್ಷಕರಿಗೆ ವಿಶೇಷ ತರಬೇತಿ: ಅಜೀಂ ಪ್ರೇಮ್ ಪ್ರತಿಷ್ಠಾನದ ಸಹಯೋಗದಲ್ಲಿ 1.97ಲಕ್ಷ ಶಾಲಾ ಶಿಕ್ಷಕರಿಗೆ ವಿಶೇಷ ತರಬೇತಿ ಕೊಡಿಸಲು ಮಾತುಕತೆ ನಡೆದಿದೆ ಎಂದರು. ಸರ್ಕಾರಿ ಶಾಲೆಗಳ ದತ್ತು ನಿಯಮ ಸಡಿಲಿಸಲು ಕರ್ನಾಟಕ ಶಿಕ್ಷಣ ಕಾಯ್ದೆ -1995ಕ್ಕೆ ತಿದ್ದುಪಡಿ ತರಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಶಾಲೆಗಳ ವಿಲೀನ ಇಲ್ಲ
ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ ಎಂಬ ಕಾರಣಕ್ಕೆ 4184 ಶಾಲೆಗಳನ್ನು ವಿಲೀನ ಮಾಡಲಾಗುತ್ತಿದೆ ಎಂಬ ಗೊಂದಲಕಾರಿ ಆದೇಶವನ್ನು ಹಿಂಪಡೆ ಯಲಾಗಿದೆ. ಯಾವುದೇ ಶಾಲೆಯನ್ನು ರದ್ದು ಮಾಡುವ ಅಥವಾ ಪಕ್ಕದ ಶಾಲೆಯೊಂದಿಗೆ ವಿಲೀನಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಸೇಠ್ ಮಾಹಿತಿ ನೀಡಿದರು.
ಜುಲೈ ಅಂತ್ಯಕ್ಕೆ ಸೈಕಲ್ ವಿತರಣೆ
5 ಲಕ್ಷ ಶಾಲಾ ಮಕ್ಕಳಿಗೆ ಜುಲೈ ಅಂತ್ಯದ ವೇಳೆಗೆ ಸೈಕಲ್ ವಿತರಿಸಲಾಗುತ್ತದೆ. ಎರಡು ಕಂಪನಿಗಳಿಗೆ ಟೆಂಡರ್ ನೀಡಲಾಗಿದೆ. ಈ ಕಂಪನಿಗಳು ತಲಾ 2.5 ಲಕ್ಷ ಸೈಕಲ್​ಗಳನ್ನು ಪೂರೈಸಲಿವೆ. ಹಿಂದಿನ ವರ್ಷಕ್ಕಿಂತ ಕಡಿಮೆ ದರದಲ್ಲಿ ಸೈಕಲ್ ವಿತರಿಸುತ್ತಿರುವುದು ವಿಶೇಷ ಎಂದು ಸೇಠ್ ಹೇಳಿದರು. ಶೇ.80 ಶಾಲೆಗಳಲ್ಲಿ ಪಠ್ಯ-ಪುಸ್ತಕಗಳ ವಿತರಣೆಯಾಗಿದೆ. ಜುಲೈ ಮೊದಲ ವಾರದಲ್ಲಿ ಶೇ.100 ಪಠ್ಯ ಪುಸ್ತಕ ವಿತರಣೆ ಪೂರ್ಣಗೊಳ್ಳಲಿದೆ. ಸರ್ಕಾರಿ ಸ್ವಾಮ್ಯದ ಜವಳಿ ನಿಗಮಕ್ಕೆ ಎರಡು ವಲಯ ಹಾಗೂ ಖಾಸಗಿ ಕಂಪನಿಗಳಿಗೆ 2 ವಲಯದ ಗುತ್ತಿಗೆ ನೀಡಲಾಗಿತ್ತು. ಜುಲೈ ಅಂತ್ಯದ ವೇಳೆಗೆ ಮೈಸೂರು ವಲಯದಲ್ಲೂ ಸಮವಸ್ತ್ರ ಹಂಚಿಕೆ ಪೂರ್ಣಗೊಳ್ಳಲಿದೆ ಎಂದು ಸೇಠ್ ವಿವರಿಸಿದರು.
ಪ್ರೌಢ ಶಾಲಾ ಶಿಕ್ಷಕರ ನೇಮಕ
ಧಾರವಾಡ ಹೈಕೋರ್ಟ್ ಸಂಚಾರಿ ಪೀಠ ತಡೆಯಾಜ್ಞೆ ನೀಡಿರುವುದರಿಂದ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ವಿಳಂಬವಾಗುತ್ತಿದೆ. ತಡೆಯಾಜ್ಞೆ ತೆರವುಗೊಳಿಸುವ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ತಡೆಯಾಜ್ಞೆ ತೆರವಾದ ತಕ್ಷಣ 1727 ಪ್ರೌಢಶಾಲಾ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಅತಿಥಿ ಶಿಕ್ಷಕರ ನೇಮಕ: ಸರ್ಕಾರಿ ಶಾಲೆಗಳಲ್ಲಿ 22 ಸಾವಿರ ಶಿಕ್ಷಕರ ಕೊರತೆಯಿದೆ. ಆದರೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ 10 ಸಾವಿರ ಅತಿಥಿ ಶಿಕ್ಷಕರನ್ನು ಜುಲೈ ಅಂತ್ಯದೊಳಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.
2 ಸಾವಿರ ಉಪನ್ಯಾಸಕರಿಗೆ ಶೀಘ್ರ ಕಾಯಮಾತಿ ಭಾಗ್ಯ
ಪುತ್ತೂರು(ದಕ್ಷಿಣ ಕನ್ನಡ): ರಾಜ್ಯದ 14 ಸಾವಿರ ಅತಿಥಿ ಉಪನ್ಯಾಸಕರ ಪೈಕಿ ಎರಡು ಸಾವಿರ ಮಂದಿಯನ್ನು ಅರ್ಹತೆ ಆಧಾರದಲ್ಲಿ ಸರ್ಕಾರಿ ಕಾಲೇಜá-ಗಳ ಕಾಯಂ ಉಪನ್ಯಾಸಕರಾಗಿ ನೇಮಕ ಮಾಡಲಾಗá-ವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದರು. ಬೆಳಂದೂರಿನಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರ ಕಾಯಮಾತಿ ಬೇಡಿಕೆ ಇದೆ. ಇದನ್ನು ಪರಿಗಣಿಸಿ 2 ಸಾವಿರ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಲಾಗುವುದು. ಸಚಿವ ಸಂಪುಟ ಅನುಮೋದನೆ ನೀಡಿದ ಬಳಿಕ ಇದು ಜಾರಿಗೆ ಬರಲಿದೆ. ಇದರ ಜತೆಗೆ 2160 ಪ್ರೊಫೆಸರ್​ಗಳನ್ನು ತಿಂಗಳೊಳಗೆ ನೇಮಕಾತಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪರಿಷ್ಕೃತ ಆದೇಶಕ್ಕೆ ಒತ್ತಾಯ
ಬೆಂಗಳೂರು: ಸರ್ಕಾರ ಪ್ರೌಢಶಾಲಾ ಶಿಕ್ಷಕ ಹಾಗೂ ಮುಖ್ಯಶಿಕ್ಷಕರಿಗೆ ಜೂ.1ರಿಂದ ಅನ್ವಯಿಸುವಂತೆ ವೇತನ ಬಡ್ತಿ ಕುರಿತು ಹೊರಡಿಸಿರುವ ಆದೇಶವನ್ನು ಪರಿಷ್ಕರಿಸಿ ತತ್ಸಮಾನ ವೃಂದದ ಹುದ್ದೆಗಳಲ್ಲಿರುವ ಕರ್ತವ್ಯ ನಿರ್ವಹಿಸುತ್ತಿರುವವರಿಗೂ ಅನ್ವಯವಾಗುವಂತೆ ಹೊಸ ಆದೇಶ ಹೊರಡಿಸಬೇಕೆಂದು ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ. ಮಂಜುನಾಥ ಒತ್ತಾಯಿಸಿದ್ದಾರೆ.

ಬಿಗ್ ನ್ಯೂಸ್:~

ಬೆಂಗಳೂರು: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ 2015ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದು ಮಾಡಿ ಹೊಸದಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ನಿರ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.ವಿಕಾಸಸೌಧದಲ್ಲಿ ಶುಕ್ರವಾರ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ತಾಂತ್ರಿಕ ಕಾರಣಗಳಿಂದ 2015ರ ನೇಮಕಾತಿ ಅಧಿಸೂಚನೆಯನ್ನು ಇಲಾಖೆಯೇ ತಡೆಹಿಡಿದಿತ್ತು. 2016ರ ಮೇನಲ್ಲಿ ಮತ್ತೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿತ್ತು. ಆದರೆ ಹಿಂದಿನ ಅಧಿಸೂಚನೆಯಲ್ಲಿ ಗೊಂದಲ ಇದ್ದುದರಿಂದ ಇಡೀ ನೇಮಕಾತಿ ಪ್ರಕ್ರಿಯೆ ರದ್ದು ಮಾಡಿ ಹೊಸದಾಗಿ ಅಧಿಸೂಚನೆ ಹೊರಡಿಸಲು ಸೂಚಿಸಲಾಗಿದೆ. ಈ ಪ್ರಕ್ರಿಯೆ ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದರು.