Wikipedia

Search results

Friday, June 30, 2017

ಎಚ್ಚರಿಕೆ!! ಎಚ್ಚರಿಕೆ!!: ~* *ಶಿಕ್ಷೆ ನೀಡುವ ಎಚ್ಚರಿಕೆ ಕೊಟ್ಟ ಶಿಕ್ಷಣ ಇಲಾಖೆ.!!*

ಸಹಾಯಕ ಪ್ರೊಪೆಸರ್ ಹುದ್ದೆಗಳಿಗೆ ನೇಮಕ ಆದೇಶ ನೀಡುವಂತೆ ಪ್ರತಿಭಟನೆ ಮಾಡಿದರೆ ಕಾನೂನು ರೀತ್ಯ ಕ್ರಮ.!!!! -ಕಾಲೇಜು ಶಿಕ್ಷಣ ಇಲಾಖೆ*

30-6-2017

*ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರೊಫೆಸರ್‌ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ನೇಮಕ ಆದೇಶ ನೀಡುವಂತೆ ಒತ್ತಾಯಿಸಿ ಅನಾವಶ್ಯಕವಾಗಿ ಸರಕಾರಿ ಕೆಲಸಕ್ಕೆ ಅಡ್ಡಿ ಉಂಟು ಮಾಡಿದಲ್ಲಿ ಕಾನೂನುರೀತ್ಯ ಕ್ರಮ ಜರುಗಿಸಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಡಾ. ಅಜಯ್‌ ನಾಗಭೂಷಣ್‌ ಎಚ್ಚರಿಕೆ ನೀಡಿದ್ದಾರೆ.*

*''ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸರಕಾರಿ ಪದವಿ ಕಾಲೇಜುಗಳಿಗೆ ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಪ್ರಗತಿಯಲ್ಲಿದೆ. ಈಗಾಗಲೇ ಪರಿಶೀಲನೆ ನಡೆಸಿರುವ ದಾಖಲೆಗಳ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಅಲ್ಲದೆ, ಬಾಕಿಯಿರುವ ದಾಖಲೆಗಳ ಪರಿಶೀಲನಾ ವರದಿಯನ್ನೂ ಕೂಡಲೇ ಸರಕಾರಕ್ಕೆ ಸಲ್ಲಿಸಲಾಗುವುದು,'' ಎಂದು ಅವರು ತಿಳಿಸಿದ್ದಾರೆ.*

*''ಈ ಹಂತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ತಮಗೆ ನೇಮಕ ಆದೇಶ ನೀಡುವಂತೆ ಒತ್ತಾಯಿಸಿ ಅನಾವಶ್ಯಕವಾಗಿ ಸರಕಾರಿ ಕೆಲಸಕ್ಕೆ ಅಡ್ಡಿಯುಂಟು ಮಾಡುವ ಪ್ರವೃತ್ತಿಯನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ, ಈ ಪ್ರವೃತ್ತಿ ಮರುಕಳಿಸಿದಲ್ಲಿ ಕಾನೂನುರೀತ್ಯ ಕ್ರಮ ಕೈಗೊಳ್ಳಲಾಗುವುದು,'' ಎಂದು ಎಚ್ಚರಿಕೆ ನೀಡಿದ್ದಾರೆ.*

*2,160 ಸಹಾಯಕ ಪ್ರೊಫೆಸರ್‌ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ನೇಮಕ ಆದೇಶ ಪತ್ರ ನೀಡುವಂತೆ ಆಗ್ರಹಿಸಿ ಬುಧವಾರ ಕಾಲೇಜು ಶಿಕ್ಷಣ ಇಲಾಖೆ ಬಳಿ ಪ್ರತಿಭಟನೆ ನಡೆಸಿ, ಅಂತಿಮ ಪಟ್ಟಿ ಪ್ರಕಟಿಸಲು ಜುಲೈ 4ರ ಗಡುವು ನೀಡಿರುವುದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿ ಈ ಆದೇಶ ಹೊರಡಿಸಿದೆ.*