Wikipedia

Search results

Wednesday, February 15, 2017

634 ವಿದ್ಯಾರ್ಥಿಗಳ ಪ್ರವೇಶಾತಿ ರದ್ದು 15-2-2017

 ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, 2008 ರಿಂದ 2013ರ ಅವಧಿಯಲ್ಲಿ ಅಕ್ರಮವಾಗಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ 634 ವಿದ್ಯಾರ್ಥಿಗಳ ಪ್ರವೇಶಾತಿಯನ್ನು ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತೃತ್ವದ ಮೂವರು ಸದಸ್ಯರ ಪೀಠ, 'ವಿದ್ಯಾರ್ಥಿಗಳು ಮೋಸ ಮಾಡಿದ್ದಾರೆ' ಎಂದು ಹೇಳಿ ಎಲ್ಲ ಅರ್ಜಿಗಳನ್ನು ತಳ್ಳಿಹಾಕಿತು. ಮಧ್ಯಪ್ರದೇಶ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಈ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಮಧ್ಯಪ್ರದೇಶ ವ್ಯವಸಾಯಿಕ್ ಪರೀಕ್ಷಾ ಮಂಡಳಿಯು ನಡೆಸಿರುವ ಪ್ರವೇಶ ಪರೀಕ್ಷೆ ಮತ್ತು ನೇಮಕಾತಿಯಲ್ಲಿ (ವ್ಯಾಪಂ) ಭಾರಿ ಅಕ್ರಮ ನಡೆದಿತ್ತು.