ಪುಟಗಳು
Wednesday, September 05, 2018
ಮತ್ತೆ ಶಿಕ್ಷಕರ ದಿನಾಚರಣೆ ಬಂದಿದೆ; ಅದೇ ಬಾಲ್ಯದ ನೆನಪುಗಳನ್ನು ಹೊತ್ತು ತಂದಿದೆ.
Thursday, August 16, 2018
ಮತ್ತೆ ಹುಟ್ಟಿ ಬನ್ನಿ ಅಟಲ್ ಜಿ
Thursday, May 31, 2018
ಶುಕ್ರವಾರ ಸಿಇಟಿ ಫಲಿತಾಂಶ ಪ್ರಕಟ – ಈ ವೆಬ್ ಸೈಟ್ಗಳಲ್ಲಿ ಸಿಗಲಿದೆ ಮಾಹಿತಿ
Saturday, April 14, 2018
ಡಾ|| ಬಿ.ಆರ್ .ಅಂಬೇಡ್ಕರ್ ಕುರಿತು ಒಂದಿಷ್ಟು ಮಾಹಿತಿ.
Tuesday, March 27, 2018
ಚುನಾವಣೆ ನೀತಿ ಸಂಹಿತೆ ಅಂದರೇನು? ಏನು ಮಾಡಬಹುದು, ಏನು ಮಾಡಬಾರದು?
Thursday, March 08, 2018
ಎಲ್ಲಾ ಗೌರವಾನ್ವಿತ ಮಹಿಳೆಯರಿಗೆ, ಮಹಿಳಾ ದಿನಾಚರಣೆಯ ಶುಭಾಶಯಗಳು
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
- By MP
"Happy Women's Day" ಎಂದು ಶುಭ ಕೋರಿದರು ಒಬ್ಬ ಹಿತಚಿಂತಕರು. ವಿದ್ಯೆ, ಕ್ರೀಡೆ, ರಾಜಕೀಯ, ಕಲೆ ಹೀಗೆ ಬಹುತೇಕ ಕ್ಷೇತ್ರಗಳಲ್ಲಿ ಪುರುಷರಿಗೆ ಸರಿಸಮನಾಗಿ ನಿಂತು ಸ್ವತಂತ್ರರಾಗಿ, ಸ್ವಾವಲಂಬಿಗಳಾಗಿ ಬದುಕುತ್ತಿರುವ ಮಹಿಳೆಯರ ನೆನಪಾಗಿ ಮನ ಹರುಷಗೊಂಡಿತು.
ಅಂಥವರು ಬೆರಳೆಣಿಕೆಯಷ್ಟು ಮಾತ್ರ. ಆದರೆ ನಿತ್ಯ ಹೆಣ್ಣಿನ ಮೇಲೆ ನಡೆಯುವ ಅತ್ಯಾಚಾರ, ದೌರ್ಜನ್ಯ, ಭ್ರೂಣ ಹತ್ಯೆ, ವೇಶ್ಯಾವಾಟಿಕೆ, ಆಸಿಡ್ ದಾಳಿ, ವರದಕ್ಷಿಣೆ ಹಿಂಸೆ, ಬಲಿ ಇವೂ ಕಣ್ಮುಂದೆ ಹಾಯ್ದು 'ಮಹಿಳಾ ದಿನಾಚರಣೆ'ಗೆ ಅರ್ಥವಿದೆಯೇ ಎಂಬ ಕಟುಸತ್ಯ ಮನವನು ಇರಿಯಿತು.
ಈ ದಿನಾಚರಣೆ ಬರೀ ಕ್ಯಾಲೆಂಡರ್, ಸಭೆ-ಸಮಾರಂಭಗಳಲ್ಲಿ ನಡೆಸುವ ಒಂದು ದಿನದ ಆಚರಣೆ ಮಾತ್ರ. ಈ ದಿನದ ಬಗ್ಗೆ ಅದೆಷ್ಟು ಮಹಿಳೆಯರಿಗೆ ಗೊತ್ತು?
ಮಹಿಳಾ ದಿನಾಚರಣೆ ಹಬ್ಬವೂ ಅಲ್ಲ, ಆನಂದದಿಂದ ಆಚರಣೆಗೊಂಡ ದಿನವೂ ಅಲ್ಲ. ನ್ಯೂಯಾರ್ಕ್ನಲ್ಲಿ ಕ್ಲಾರಾ ಜೆಟ್ಕಿನ್ ಎಂಬ ಮಹಿಳಾ ಕಾರ್ಮಿಕೆ ಕೆಲಸಕ್ಕಾಗಿ, ಸಮಾನ ವೇತನಕ್ಕಾಗಿ, ಹೆರಿಗೆ ಸೌಲಭ್ಯಕ್ಕಾಗಿ ತಿಂಗಳುಗಟ್ಟಲೆ ಹೋರಾಟ ನಡೆಸಿ ಗೆಲುವು ಸಾಧಿಸಿದ ದಿನ. ಹುಟ್ಟಿನಿಂದ ಸಾಯುವವರೆಗೂ ದಿನ ನಿತ್ಯ ಒಂದಿಲ್ಲೊಂದು ಸಂಘರ್ಷದಲ್ಲಿ ಬಿದ್ದು ಸಾಧಿಸಲು ಪ್ರಯತ್ನ ಪಡುತ್ತಿರುವ, ಸಂಘರ್ಷದಿಂದ ಸಾಧಿಸಿದ ದಿನದ ಒಂದು ಸ್ಮರಣೆಯ ದಿನ ಮಾತ್ರ.
ವಿಶ್ವಸಂಸ್ಥೆ 1975ರಲ್ಲಿ ಈ ದಿನವನ್ನು "ವಿಶ್ವ ಮಹಿಳಾ ದಿನ" ಎಂದು ಘೋಷಿಸಿತು. ದುಡಿವ ಮಹಿಳೆಯರನ್ನು ಗೌರವಿಸಿ, ಪ್ರೋತ್ಸಾಹ ನೀಡುವುದಕ್ಕೆ "ಮಹಿಳಾ ದಿನ" ಆಚರಿಸಲಾಗುತ್ತದೆ. ಇದು ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆಯ ಸಂಕೇತ ದಿನ.
21ನೆಯ ಶತಮಾನದಲ್ಲಿ ಮಹಿಳೆ ಪಾತ್ರ ಬದಲಾಗಿದೆ. ವೃತ್ತಿ, ಸಂಸಾರ ಎರಡನ್ನೂ ನಿಭಾಯಿಸಬಲ್ಲೆ ಎಂದು ಮಾದರಿಯಾಗಿ ನಿಂತಿದ್ದಾಳೆ. ಹೆಣ್ಣು ಇದೀಗ ಕಷ್ಟವಿದ್ದಲ್ಲಿ ಗೊಳೋ ಎಂದು ಅಳುವ ಅಳುಮುಂಜಿಯಾಗಿಲ್ಲ. ದಿಟ್ಟೆಯಾಗಿ ಜೀವನದ ಪ್ರತಿಯೊಂದು ಸಮಸ್ಯೆಯನ್ನೂ ಪರಿಹರಿಸಿಕೊಳ್ಳುವ ಶಕ್ತಿ ತನ್ನಲ್ಲೂ ಇದೆ ಎಂದು ತೋರಿಸಿಕೊಟ್ಟಿದ್ದಾಳೆ. ಬದುಕು ಎಂದರೆ ನೋವು ನಲಿವುಗಳ ಸಮ್ಮಿಲನ. ಆದರೆ ಹೆಣ್ಣಿನ ಬದುಕು ಅಂದರೆ ಅದು ಕೇವಲ ನೋವುಗಳ ಸಂಕಲನ. ಬುದ್ಧಿವಂತಿಕೆ, ಪರಿಶ್ರಮ, ಕ್ರೀಯಾಶಿಲತೆ, ನೋವು ನುಂಗುವ ಶಕ್ತಿ ಮತ್ತು ಸಂಘಟನೆಯಲ್ಲಿ ತಾನು ಮುಂದು ಎಂದು ಹೆಣ್ಣು ತೋರಿಸಿಕೊಟ್ಟಿದ್ದಾಳೆ.
ಬಹುತೇಕ ಪ್ರಮುಖ ಹುದ್ದೆಗಳಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಮಹಿಳೆ ರಾರಾಜಿಸುತ್ತಿದ್ದಾಳೆ. ಇವತ್ತು ಮಹಿಳೆ ಉತ್ತಮ ಶಿಕ್ಷಣ ಪಡೆಯುತ್ತಿದ್ದಾಳೆ. ಒಳಮನೆ ಮಾತ್ರವೇ ಅಲ್ಲ ಹೊರ ಜಗತ್ತಿನ ಅರಿವೂ ಆಕೆಗೆ ಆಗಿದೆ. ಯಾರನ್ನು ಹೇಗೆ ಎಲ್ಲಿ ನಿಭಾಯಿಸಬೇಕೆಂಬ ಕಲೆಯೂ ಕರಗತವಾಗಿದೆ.
ಕೊಟ್ಟ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುವ ತಾಳ್ಮೆ ಮತ್ತು ಚಾಕಚಕ್ಯತೆ ಆಕೆಯ ರಕ್ತದಲ್ಲೇ ಇದೆ. ಅದಕ್ಕೀಗ ವೇದಿಕೆ ದೊರಕುತ್ತಿದೆಯಷ್ಟೆ. ಆದರೆ ಇಡೀ ದಿನ ಮನೆಯಲ್ಲಿ ದುಡಿಯುವ ಹೆಂಡತಿ/ತಾಯಿ/ಅಕ್ಕ-ತಂಗಿಯರ ಪರಿಶ್ರಮಕ್ಕೂ ಒಂದು ಪ್ರೋತ್ಸಾಹ, ಶಹಬಾಸ್ಗಿರಿ ಸಿಗಬೇಕು, ಹೌದಲ್ಲವೇ?
ಮಹಿಳಾ ಸಬಲೀಕರಣ ಎಂಬುದು ಒಂದು ಪ್ರಬಲ ಅಂಶ ಹುಟ್ಟಿಕೊಂಡಿದೆ. ವಿವಿಧ ಕ್ಷೇತ್ರಗಳಲ್ಲಿ ಮಹಿಳೆ ಮುನ್ನಡೆದಿದ್ದರೂ ಅವಳ ಸ್ಥಿತಿಗತಿ, ಸ್ಥಾನಮಾನ, ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೇತ್ರಗಳಲ್ಲಿ ಮೇಲಕ್ಕೇರಿಸುವುದು ಹೆಚ್ಚು ಸಾಧ್ಯವಾಗಿಲ್ಲ. ಇದಕ್ಕೆ ಕಾರಣಗಳು ಹಲವಾರು ಇದ್ದರೂ ಉತ್ತರ ಅತ್ಯಂತ ಸರಳ. ಮಹಿಳಾ ಅಭಿವೃದ್ಧಿ ಎಂದಾಕ್ಷಣ ಕೇವಲ ಬೆರಳೆಣಿಕೆಯ ಮಹಿಳೆಯರಿಗೆ ಅವಕಾಶ ಕಲ್ಪಿಸುವುದು, ಸಬಲೀಕರಣ ಎಂದಾಕ್ಷಣ ಗಂಡನನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳುವುದು ಎಂದರ್ಥವಲ್ಲ. 'ಮಹಿಳಾ ಪರ ಸಂಘರ್ಷ' ಎನ್ನುವುದು ಒಂದು ದಿನದ ಕಾರ್ಯಕ್ರಮ ಮಾಡಿ ಮುಗಿಸುವಂತದ್ದಲ್ಲ.
'ದೆಹಲಿ ಅತ್ಯಾಚಾರ ಘಟನೆ ಸಾಂಕೇತಿಕ ಮಾತ್ರ. ಈಗಾಗಲೇ ಸಾಕಷ್ಟು ಅತ್ಯಾಚಾರ ಪ್ರಕರಣಗಳು ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಉಳಿದಿವೆ. ತ್ವರಿತ ನ್ಯಾಯಾಲಯಕ್ಕೆ ರವಾನಿಸಿ, ಅಪರಾಧಿಗಳಿಗೆ ಬೇಗನೇ ಶಿಕ್ಷೆ ಕೊಡುವಂತಾಗಬೇಕು. ಅದಕ್ಕಾಗಿಯೇ ಒಂದು ಕಾನೂನನ್ನು ಜಾರಿಗೊಳಿಸಬೇಕು'.
ಶಿಕ್ಷಣ, ಆರ್ಥಿಕ ಸಬಲೀಕರಣ ಸಾಧಿಸಿ ಸ್ವಾವಲಂಬಿ ಬದುಕು ನಡೆಸುತ್ತಿರುವ ಮಹಿಳೆ ಇನ್ನೂ ಮೀಸಲಾತಿಯಡಿಯಲ್ಲಿ ದುಡಿಯಬೇಕಾದ ಅನಿವಾರ್ಯತೆ. ಮಹಿಳೆಯರಿಗೆ ಹಕ್ಕು, ಹಿತರಕ್ಷಣೆ, ಜಾಗತಿಕ ಮಟ್ಟದಲ್ಲಿ ತಿಳಿವಳಿಕೆ, ಶಿಕ್ಷಣ, ತರಬೇತಿ, ವಿಜ್ಞಾನ, ತಂತ್ರಜ್ಞಾನಕ್ಕೆ ನೆರವು ನೀಡಿ, ಸಮಾಜದಲ್ಲಿ ಸಮಾನತೆಯ ವೈಶಿಷ್ಟ್ಯಪೂರ್ಣ ಬದಲಾವಣೆಗಳಿಗೆ ಅವಕಾಶ ಕಲ್ಪಿಸಬೇಕು.
ಉದ್ಯೋಗ ಕ್ಷೇತ್ರದಲ್ಲಿ ಹೆಣ್ಣು ಗಂಡಿಗೆ ಸರಿಸಮಾನ ಎಂದು ತೋರಿಸಿಕೊಂಡಿದ್ದರೂ, ಹಲವೆಡೆಗಳಲ್ಲಿ ಇನ್ನೂ ನಡೆಯುತ್ತಿರುವ ಲಿಂಗ ತಾರತಮ್ಯ, ಹೆಣ್ಣು ಭ್ರೂಣಹತ್ಯೆ, ಅತ್ಯಾಚಾರ ಇವುಗಳನ್ನು ತಡೆಯಬೇಕು. ವಿಶ್ವಾಸ, ಪ್ರೀತಿ, ಮಮತೆ, ನಂಬಿಕೆ, ನೈತಿಕ ಮೌಲ್ಯಗಳು ನಮ್ಮ ಸಮಾಜದ ಕಣ್ಣುಗಳಾಗಬೇಕು. ಮಹಿಳೆಯರ ಸಾಧನೆಗೆ ಪ್ರೋತ್ಸಾಹ ನೀಡಬೇಕು. ಇದಕ್ಕೆ ಪುರುಷರ ನೈತಿಕ ಬೆಂಬಲ ದೊರಕಬೇಕು.
'ಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೆ ತತ್ರ ದೇವತಾಃ' ಎಂಬ ಮಾತು ಕೇವಲ ಮಾತಾಗಿಯೇ ಇರಬಾರದು, ಅದನ್ನು ಆಚರಣೆಗೆ ತರಬೇಕು. ಆಗ ಮಾತ್ರ ಈ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಒಂದು ಒಳ್ಳೆಯ ಸ್ಥಾನ ಸಿಗಲು ಸಾಧ್ಯ. ಹೀಗಾದಲ್ಲಿ ಮಾತ್ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ದೇಶ ಅರ್ಥಪೂರ್ಣ.
ಮಹಿಳೆಯರಿಗೆ *_"ಮಹಿಳಾ ದಿನಾಚರಣೆಯ ಶುಭಾಶಯಗಳು
*ಮಹಿಳಾ ದಿನಾಚರಣೆ ಬಗ್ಗೆ:
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಪ್ರತಿ ವರ್ಷ ಮಾರ್ಚಿ 8 ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ.
ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.
*ಮಹಿಳಾ ದಿನಾಚರಣೆಯ ಹಿನ್ನೋಟ:
1910ರ ಆಗಸ್ಟ್ನಲ್ಲಿ ಡೆನ್ಮಾರ್ಕ್ನ ಕೋಪೆನ್ಹೇಗನ್ನಲ್ಲಿ ಎರಡನೆಯ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು.
ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕೆಯ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು.
ಈ ಸಮ್ಮೇಳನಕ್ಕೆ ಅಂತರರಾಷ್ಟ್ರೀಯ ಮಹಿಳಾ ಸೆಕ್ರೆಟೇರಿಯೆಟ್ನ ಮುಖ್ಯಸ್ಥೆಯಾಗಿದ್ದ *_ಕ್ಲಾರಾ ಜೆಟ್ಕಿನ್_* ಅಧ್ಯಕ್ಷೆಯಾಗಿದ್ದರು.
ಈ ಸಮ್ಮೇಳನದಲ್ಲಿ ಚರ್ಚಿತವಾದ ಎರಡು ವಿಷಯಗಳೆಂದರೆ ಸಾರ್ವತ್ರಿಕ ಮತದಾನದ ಹಕ್ಕು ಮತ್ತು ಮಹಿಳೆಯರ ಹೆರಿಗೆ ಭತ್ಯೆ ಮತ್ತು ಇತರ ಸೌಕರ್ಯಗಳು.
ಕ್ಲಾರಾ ಜೆಟ್ಕಿನ್ ಈ ಸಮ್ಮೇಳನದಲ್ಲಿ ಮಾರ್ಚ್ 8ನ್ನು ಮಹಿಳಾ ದಿನವನ್ನಾಗಿ ಆಚರಿಸಬೇಕೆಂದು ೧೯೧೧ರಲ್ಲಿ ನಿರ್ಣಯ ಮಂಡಿಸಿದರು.
ಅಲ್ಲಿ ನೆರೆದಿದ್ದ ವಿವಿಧ ರಾಷ್ಟ್ರಗಳ ಸದಸ್ಯ ಪ್ರತಿನಿಧಿಗಳು ಸರ್ವಾನುಮತದಿಂದ ಸಮ್ಮತಿಸಿದರು.
ಈ ಸಮ್ಮೇಳನದಲ್ಲಿ ಫಿನ್ಲೆಂಡ್ನಲ್ಲಿ ಆಗಷ್ಟೇ ಚುನಾಯಿತರಾಗಿದ್ದ ಮೂವರು ಮಹಿಳೆಯರಿದ್ದು, ಅವರು ಜೆಟ್ಕಿನ್ ಸಲಹೆಯನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಹೀಗೆ ಅಂತರರಾಷ್ಟ್ರೀಯ ಮಹಿಳಾ ದಿನವೆನ್ನುವುದು ಪ್ರತಿಭಟನೆ ಮತ್ತು ರಾಜಕೀಯ ಕ್ರಿಯಾಶೀಲತೆಯ ದಿನವಾಗಿ ಅಸ್ತಿತ್ವಕ್ಕೆ ಬಂದಿತು.
1911ರಲ್ಲಿ ಮತದಾನದ ಹಕ್ಕನ್ನು ಬೇಡಿಕೆಯಾಗಿಟ್ಟುಕೊಂಡು ಮೊದಲ ಬಾರಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.
ಇದಕ್ಕೂ ಮೊದಲು 1903ರಲ್ಲಿ ಅಮೆರಿಕೆಯಲ್ಲಿ ಮತದಾನದ ಹಕ್ಕಿಗಾಗಿ ಹೋರಾಟ ನಡೆಸಿದ್ದ ಮಹಿಳಾ ಕಾರ್ಮಿಕ ಸಂಘಟನೆಗಳು ‘ಮಹಿಳೆಯರ ಟ್ರೇಡ್ ಯೂನಿಯನ್ ಲೀಗ್’ ಸ್ಥಾಪಿಸಿ ರಾಜಕೀಯ ಮತ್ತು ಆರ್ಥಿಕ ಕಲ್ಯಾಣವನ್ನು ತಮ್ಮ ಸಂಘಟನೆಯ ಮುಖ್ಯ ಧ್ಯೇಯವನ್ನಾಗಿಸಿಕೊಂಡವು.
1908ರ ಫೆಬ್ರುವರಿ ಕೊನೆಯ ಭಾನುವಾರ ಅಮೆರಿಕೆಯಲ್ಲಿ ಮತದಾನದ ಹಕ್ಕಿಗಾಗಿ ಬೃಹತ್ ಪ್ರತಿಭಟನಾ ಪ್ರದರ್ಶನಗಳು ನಡೆದಿದ್ದವು. ನಂತರ 1909ರಲ್ಲಿ ಸಿದ್ಧ ಉಡುಪುಗಳ ಕಾರ್ಖಾನೆಗಳಲ್ಲಿ 20,000ದಿಂದ 30,000ದಷ್ಟು ಮಹಿಳೆಯರು ಚಳಿಗಾಲದಲ್ಲಿ 13 ವಾರಗಳ ಕಾಲ ಮುಷ್ಕರ ನಡೆಸಿ ದಸ್ತಗಿರಿಯಾದರು. ಮಹಿಳೆಯರ ಟ್ರೇಡ್ ಯೂನಿಯನ್ ಲೀಗ್ನವರು ಜಾಮೀನು ನೀಡಿ ಬಂಧಿತ ಕೆಲಸ ಗಾರರನ್ನು ಬಿಡಿಸಿಕೊಂಡರು. ಈ ಅಮೆರಿಕದ ಮಹಿಳೆಯರ ಹೋರಾಟದಿಂದ ಸ್ಫೂರ್ತಿಗೊಂಡ ಕ್ಲಾರಾ ಜೆಟ್ಕಿನ್ ಸೋಷಿಯಲಿಸ್ಟ್ ಮಹಿಳೆಯರ ಸಮ್ಮೇಳನದಲ್ಲಿ ವರ್ಷಕ್ಕೊಮ್ಮೆ ದಿನವನ್ನು ನಿಗದಿಪಡಿಸಿ ಮಹಿಳೆಯರು ತಮ್ಮ ಬೇಡಿಕೆಗಳನ್ನು ಒತ್ತಾಯಿಸಲು ಅನುವಾಗುವಂತಹ ವ್ಯವಸ್ಥೆಗಾಗಿ ಸಲಹೆ ನೀಡಿ ಕಾರ್ಯರೂಪಕ್ಕೆ ತರಲು ಶ್ರಮಿಸಿದಳು.
*ಪೀಠಿಕೆ:
ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ "ಅಂತರಾಷ್ಟ್ರೀಯ ಮಹಿಳೆಯರ ದಿನ" ವನ್ನು ಆಚರಿಸುತ್ತಾರೆ. ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಿರದೆ , ಅದು ರಾಷ್ಟ್ರೀಯ, ಜನಾಂಗೀಯ, ಭಾಷಾವಾರು, ಸಾಂಸ್ಕ್ರತಿಕ, ಆರ್ಥಿಕ ಅಥವಾ ರಾಜಕೀಯ ಕ್ಷೇತ್ರವಾಗಲಿ, ಎಲ್ಲಾದರಲ್ಲೂ ತಮ್ಮದೇ ಆದ ಛಾಪನ್ನ ಮೂಡಿಸಿದ್ದಾರೆ.
ಮಹಿಳೆಯರ ಈ ಪ್ರಗತಿಯನ್ನು ಗುರುತಿಸಿ ಈ ದಿನವನ್ನು ಅವರಿಗೆ ಅರ್ಪಿಸಲಾಗಿದೆ.
೧೯೭೫ರ "ಅಂತರಾಷ್ಟ್ರೀಯ ಮಹಿಳೆಯರ ದಿನ"ದ ಸಮಯದಲ್ಲಿ, ಮಾರ್ಚ್ ೮ ರಂದು ಸಂಯುಕ್ತ ರಾಷ್ಟ್ರಗಳು ಮಹಿಳಾ ದಿನವನ್ನ ಆಚರಿಸಲು ಆರಂಭಿಸಿದವು.
ಎರಡು ವರ್ಷದ ನಂತರ,೧೯೭೭ ರಲ್ಲಿ, "ದಿ ಜನರಲ್ ಅಸ್ಸೆಂಬ್ಲಿ" ಮಹಿಳೆಯರ ಹಕ್ಕು ಮತ್ತು ಶಾಂತಿ ಸ್ಥಾಪನೆಯನ್ನ ಆಯಾ ದೇಶದ ಸದಸ್ಯರು ಗಮನಿಸಿ ತಮ್ಮ ದೇಶದ ಐತಿಹಾಸಿಕ ಮತ್ತು ರಾಷ್ಟ್ರೀಯ ಸಂಪ್ರದಾಯಕ್ಕೆ ತಕ್ಕಂತೆ ಅಳವಡಿಸಿಕೊಳ್ಳುವಂತೆ ಕರೆ ನೀಡಿತು.
ಹೀಗೆ ಕರೆ ನೀಡುವಾಗ ಮಹಿಳೆಯ ಪಾತ್ರ ಹಾಗು ಅವರ ಮೇಲೆ ನಡೆಯುತ್ತಿರುವ ಪಕ್ಷಪಾತವನ್ನ ಗಮನಿಸಿ ಅವರಿಗೆ ಸ್ಪರ್ಧಿಸುವ ಪೂರ್ತಿ ಅವಕಾಶವನ್ನು ನೀಡುವಂತೆ ಘೋಷಿಸಿತು.
Friday, February 16, 2018
ಬಜೆಟ್ ಮುಖ್ಯಾಂಶಗಳು
ರೈತರ ಸಾಲ ಮನ್ನಾ*
*ಬಜೆಟ್ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ.*
– *ಬಜೆಟ್ ಗಾತ್ರ 209181 ಲಕ್ಷ ಕೋಟಿ*
– *ಮೃತ ರೈತರ ಸಾಲ ಮನ್ನಾ. ಸಹಕಾರಿ ಸಂಘದಲ್ಲಿ ಬೆಳೆ ಸಾಲ ಪಡೆದಿದ್ದ ರೈತರ 1 ಲಕ್ಷದ ವರೆಗೆ ಸಾಲ ಮನ್ನಾ*
*ಯಾವುದಕ್ಕೆ ಎಷ್ಟು ಕೋಟಿ?*
ಶಿಕ್ಷಣ 26864 ಕೋಟಿ, ಜಲಸಂಪನ್ಮೂಲ 18112 ಕೋಟಿ ರೂ.
ನಗರಾಭಿವೃದ್ಧಿ 17196 ಕೋಟಿ, ಗ್ರಾಮೀಣಾಭಿವೃದ್ಧಿ – ಪಂಚಾಯತ್ ರಾಜ್ 14268 ಕೋಟಿ,
ಇಂಧನ 14135 ಕೋಟಿ, ಸಮಾಜ ಕಲ್ಯಾಣ 11822 ಕೋಟಿ,
ಲೋಕೋಪಯೋಗಿ 9271 ಕೋಟಿ,
ಒಳಾಡಳಿತ ಮತ್ತು ಸಾರಿಗೆ 8855 ಕೋಟಿ,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ 8822 ಕೋಟಿ, ಕೃಷಿ ಮತ್ತು ತೋಟಗಾರಿಕೆ 7031 ಕೋಟಿ, ಕಂದಾಯ 6642 ಕೋಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ 5371 ಕೋಟಿ, ವಸತಿ 3942 ಕೋಟಿ, ಆಹಾರ ಮತ್ತು ನಾಗರಿಕ ಸರಬರಾಜು 3882 ಕೋಟಿ, ಇತರೆ 75081 ಕೋಟಿ ರೂ.
*ಕೃಷಿ*
– ಮಳೆ ಆಶ್ರಿತ ಬೆಳೆ ಬೆಳೆಯುವ ರೈತರಿಗೆ ಧನ ಸಹಾಯ. ಪ್ರತಿವರ್ಷ ಗರಿಷ್ಠ 1 ಹೆಕ್ಟೇರ್ಗೆ 5 ಸಾವಿರ, 10 ಸಾವಿರ ಬ್ಯಾಂಕ್ ಖಾತೆಗೆ ಜಮೆ
– ಸಹಕಾರಿ ಬ್ಯಾಂಕ್ನಲ್ಲಿ ಸಾಲ ಪಡೆದ ರೈತರು ಮೃತಪಟ್ಟರೆ 1 ಲಕ್ಷದವರೆಗಿನ ಸಾಲ ಮನ್ನ
– ಕೃಷಿ ಚಟುವಟಿಕೆಯಲ್ಲಿ ಹಾವು ಕಡಿದರೆ 1ಲಕ್ಷದಿಂದ 2 ಲಕ್ಷ ಪರಿಹಾರ
– ಬಣವೆಗಳಿಗೆ ಬೆಂಕಿ ಬಿದ್ದರೆ 10 ರಿಂದ 20 ಸಾವಿರಕ್ಕೆ ಏರಿಕೆ
– ಮೃತ ರೈತರ ಸಾಲ ಮನ್ನಾ
– 1 ಲಕ್ಷದ ವರೆಗೆ ಸಹಕಾರಿ ಸಾಲ ಮನ್ನಾ
– 25 ಎಪಿಎಂಸಿಗಳಲ್ಲಿ ಗುಣ ವಿಶ್ಲೇಷಣಾ ಪ್ರಯೋಗಾಲಯ
– ಪ್ರತಿ ಸಮಿತಿಗೆ 10 ಲಕ್ಷ ವೆಚ್ಚದಂತೆ 2.5 ಕೋಟಿ
– ವಸತಿ ರಹಿತ 1 ಸಾವಿರ ಹಮಾಲರಿಗೆ ವಸತಿ ಸೌಲಭ್ಯ
*ಲೋಕೋಪಯೋಗಿ*
* ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನ ಕೈಗೊಳ್ಳಲು 150 ಕೋಟಿ ರೂ.
* ದೆಹಲಿಯ ಕರ್ನಾಟಕ ಭವನ ಹಳೇ ಕಟ್ಟಡ ಕೆಡವಿ ಹೊಸ ಭವನ ನಿರ್ಮಾಣ – 30 ಕೋಟಿ
* ಬೆಂಗಳೂರು ಎಂ.ಎಸ್.ಬಿಲ್ಡಿಂಗ್ ಹತ್ತಿರ 20 ಕೋಟಿ ರೂ. ವೆಚ್ಚದಲ್ಲಿ ಮಲ್ಟಿಲೆವಲ್ ಕಾರ್ ಪಾರ್ಕಿಂಗ್
– ಅಂತರ್ ಜಾತಿಯ ವಿವಾಹಕ್ಕೆ ಪ್ರೋತ್ಸಾಹ
– ಒಂದೂವರೆ ಲಕ್ಷದಷ್ಟು ಸರ್ಕಾರಿ ಹುದ್ದೆಗಳ ಭರ್ತಿ. ಬಂಡವಾಳ ಹೂಡಿಕೆಗೆ ದೇಶದಲ್ಲೇ ಕರ್ನಾಟಕ ಪ್ರಸಕ್ತ ಸ್ಥಳ
– ಬೆಂಗಳೂರನ್ನು ಸ್ಟಾರ್ಟ್ ಅಪ್ ನಗರಿಯಾಗಿ ಅಭಿವೃದ್ಧಿ
– ಅಭಿವೃದ್ಧಿಯೆಡೆಗೆ ನಡೆಯಬೇಕೆಂಬ ಬಯಕೆ, ನಮ್ಮದು ರೈತ ಸ್ನೇಹಿ ಸರ್ಕಾರ
ಅಲ್ಪಸಂಖ್ಯಾತ ಸಮುದಾಯಕ್ಕೆ 2281 ಕೋಟಿ ರೂ.
– ಕ್ರೈಸ್ತ ಸಮುದಾಯಕ್ಕೆ 200 ಕೋಟಿ ರೂ.
– ಜೈನ, ಸಿಖ್ ಸಮುದಾಯಕ್ಕೆ 80 ಕೋಟಿ ರೂ.
– ಮದರಸಾಗಳ ಆಧುನೀಕರಣಕ್ಕೆ 15 ಕೋಟಿ ರೂ.
*ವಾಣಿಜ್ಯ ಮತ್ತು ಕೈಗಾರಿಕೆ*
* ಸರಕು ಸಾಗಾಣಿಕೆ ಸೌಲಭ್ಯ ಸುಧಾರಿಸಲು ಬಹು ಮಾದರಿಯ ಲಾಜಿಸ್ಟಿಕ್ ಪಾರ್ಕ್ ಬೆಂಗಳೂರು ಸಮೀಪ 400 ಎಕರೆಯಲ್ಲಿ, ಹುಬ್ಬಳ್ಳಿಯಲ್ಲಿ 50 ಎಕರೆಯಲ್ಲಿ ಅಭಿವೃದ್ಧಿ
* ಭಾರತೀಯ ಕೈಗಾರಿಕೆಗಳ ಒಕ್ಕೂಟದ ಸಹಯೋಗದೊಂದಿಗೆ 23 ಕೋಟಿ ವೆಚ್ಚದಲ್ಲಿ ಕೈಗಾರಿಕಾ ತಂತ್ರಜ್ಞಾನದಲ್ಲಿ ಕಲಿಕಾ ಶ್ರೇಷ್ಠತಾ ಕೇಂದ್ರ ಸ್ಥಾಪನೆ – ಯೋಜನಾ ವೆಚ್ಚದಲ್ಲಿ ಸರ್ಕಾರದ ಪಾಲು ಶೇ.50ರಷ್ಟು
* ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸಲು 20 ರಿಂದ 30 ಎಕರೆಗಳ ಬಂಜರು ಅಥವಾ ಒಣ ಭೂಮಿಯನ್ನ ಗ್ರಾಮೀಣ ಉದ್ಯಮ ವಲಯ ಎಂದು ಅಧಿಸೂಚಿಸಲಾಗುವುದು.
*ಪ್ರಾಥಮಿಕ – ಪ್ರೌಢ ಶಿಕ್ಷಣ 22350 ಕೋಟಿ*
* 100 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ
* ಪ್ರತಿ ಶಾಲೆಗೆ 5 ಲಕ್ಷ ದಂತೆ ಒಟ್ಟು 5 ಕೋಟಿ ಅನುದಾನ
* ಸರ್ಕಾರಿ ಶಾಲೆಗಳಲ್ಲಿ ಸಿಸಿಟಿವಿ ಅಳವಡಿಕೆ
* 10 ಲಕ್ಷ ವಿದ್ಯಾರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ಸೌಲಭ್ಯ 5 ಕೋಟಿ
* 100 ವರ್ಷ ಪೂರೈಸಿದ ಪಾರಂಪರಿಕ ಶಾಲೆ ಗುರುತಿಸಿ ನವೀಕರಣ
* 7.5 ಕೋಟಿ ವೆಚ್ಚದಲ್ಲಿ ಸಂಚಾರಿ ವಿಜ್ಞಾನ ಪ್ರಯೋಗಾಲಯ
*ಉನ್ನತ ಶಿಕ್ಷಣ – 4514 ಕೋಟಿ*
* ಮೈಸೂರು ವಿವಿಯಲ್ಲಿ ಬಸವ ಅಧ್ಯಯನ ಕೇಂದ್ರಕ್ಕೆ 2 ಕೋಟಿ
* ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ, ಬಾಗಲಕೋಟೆ ಜಮಖಂಡಿಯಲ್ಲಿ ರಾಣಿ * * * * ಚೆನ್ನಮ್ಮ ವಿವಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆಗೆ ತಲಾ 1 ಕೋಟಿ
* ಉನ್ನತ ಶಿಕ್ಷಣ ಪಡೆಯುವ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ಉಚಿತ ಪ್ರವೇಶ
* ಧಾರವಾಡ ಕರ್ನಾಟಕ ವಿವಿಯಲ್ಲಿ ಕೊಂಕಣಿ ಅಧ್ಯಯನ ಪೀಠಕ್ಕೆ 1 ಕೋಟಿ
ಆರೋಗ್ಯ ಇಲಾಖೆಗೆ 6,645 ಕೋಟಿ ರೂ.
* ಆರೋಗ್ಯ ಕರ್ನಾಟಕ ಯೋಜನೆ
* ಹೊಸದಾಗಿ 571 ಪ್ರಾಥಮಿಕ ಆರೋಗ್ಯ ಕೇಂದ್ರ
* ಖಾಸಗಿ ಆಸ್ಪತ್ರೆಗೆ ಮೇಲ್ವಿಚಾರಣೆಗೆ ಕರ್ನಾಟಕ ಖಾಸಗಿ ವೈದ್ಯಕೀಯ ಕಾಯ್ದೆ ಅನುಷ್ಠಾನಕ್ಕೆ ರಾಜ್ಯ ಆರೋಗ್ಯ ಪರಿಷತ್ತು ಸ್ಥಾಪನೆ
ವೈದ್ಯಕೀಯ ಶಿಕ್ಷಣ 2,177 ಕೋಟಿ ರೂ.
* ಬಿಎಂಸಿಯಲ್ಲಿ 1000 ಹಾಸಿಗೆ ಇರುವ ಹೆಚ್ಚುವರಿ ವಾರ್ಡ್
* ಗದಗ, ಕೊಪ್ಪಳ ಚಾಮರಾಜನಗರದ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ 100 ಕೋಟಿ ರೂ.
* ಶಿವಮೊಗ್ಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 7.81 ಕೋಟಿ ರೂ. ವೆಚ್ಚದಲ್ಲಿ ಹೃದ್ರೋಗ ಚಿಕಿತ್ಸಾ ಸೌಲಭ್ಯ
* ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಪೆಟ್ ಸಿಟಿ ಸ್ಕ್ಯಾನ್ ಸೌಲಭ್ಯ
* ಮೈಸೂರು ನರ್ಸಿಂಗ್ ಕಾಲೇಜಿಗೆ 30 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ
* ಬೀದರ್, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೃದ್ರೋಗ ಚಿಕಿತ್ಸಾ ಘಟಕ
* ಗುಲ್ಬರ್ಗಾ ವೈದಕೀಯ ಕಾಲೇಜಿನಲ್ಲಿ ಸುಟ್ಟಗಾಯಗಳ ವಾರ್ಡ್ ಆರಂಭ
* ಹಾಸನ, ಮೈಸೂರು, ಕಾರವಾರ ವೈದಕೀಯ ಕಾಲೇಜಿನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ
* ನರ್ಸಿಂಗ್ ಕಾಲೇಜುಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ
ಮಾಹಿತಿ ತಂತ್ರಜ್ಞಾನ – 247 ಕೋಟಿ ರೂ.
* ಕಲಬುರಗಿಯಲ್ಲಿ 5 ಕೋಟಿ ವೆಚ್ಚದಲ್ಲಿ ಇನ್ ಕ್ಯೂಬೇಷನ್ ಸೆಂಟರ್ ಸ್ಥಾಪನೆ – ದೇಶಪಾಂಡೆ ಫೌಂಡೇಷನ್ ಸಹಯೋಗ
* ಕೇಂದ್ರ ಸರ್ಕಾರದ ಸಂಸ್ಥೆ ಸಿ-ಕ್ಯಾಂಪ್ ಸಹಯೋಗದೊಂದಿಗೆ ಅಗ್ರಿ ಇನ್ನೋವೇಷನ್ ಕೇಂದ್ರ ಸ್ಥಾಪನೆ
* ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕರ್ನಾಟಕ ನಾವಿನ್ಯತಾ ಪ್ರಾಧಿಕಾರ ಸ್ಥಾಪನೆ
* ಉದ್ಯಮಗಳ ವಿನ್ಯಾಸ ಹಾಗೂ ಉತ್ಪನ್ನಗಳ ವಿನ್ಯಾಸ ಉತ್ತೇಜನಕ್ಕೆ ಸೆಂಟರ್ ಫಾರ್ ಎಕ್ಸ್ ಲೆನ್ಸ್ ಇನ್ ಡಿಸೈನ್ ಸ್ಥಾಪನೆ
* ತಂತ್ರಜ್ಞಾನಗಳನ್ನ ಕಾನೂನು ಚೌಕಟ್ಟಿನಲ್ಲಿ ತರುವ ಉದ್ದೇಶದಿಂದ ಲೀಗಲ್ ಫ್ರೇಮ್ ವರ್ಕ್ ಫಾರ್ ಇನ್ನೋವೇಷನ್ ಸ್ಥಾಪನೆ
* ವಿಜ್ಞಾನ ಮತ್ತು ಇಂಜಿನಿಯರಿಂಗ್ ನ ಪಿಎಚ್ಡಿ ಸಂಶೋದಕರಿಗೆ ಡಿಎಸ್ ಟಿ ಶಿಷ್ಯವೇತನ ಪ್ರಾರಂಭಿಸಲು 1 ಕೋಟಿ ರೂ.
* ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಮಿನಿ ತ್ರೀಡಿ ತಾರಾಲಯ ಸ್ಥಾಪನೆ
ಕಂದಾಯ ಇಲಾಖೆಗೆ 6,642 ಕೋಟಿ ರೂ.
* ಜಾತಿ ಪ್ರಮಾಣ ಪತ್ರ ನೀಡಲು `ಈ ಕ್ಷಣ’ ಯೋಜನೆ ಆರಂಭ
* ಭೂ ಮಾಪನ ಇಲಾಖೆಯಿಂದ 5 ಮೊಬೈಲ್ ಆ್ಯಪ್ ಅವುಗಳೆಂದ್ರೆ ಸಂಯೋಜನೆ, ಸಮೀಕ್ಷೆ, ಮೌಲ್ಯ, ದಿಶಾಂಕ್, ಆಧಾರ್ ಸಂಗ್ರಹಣೆ
* ಪಹಣಿ ದಾಖಲೆ ಉಪಯೋಗಿಸಲು ಲ್ಯಾಂಡ್ ಟೈಟಲಿಂಗ್ ಯೋಜನೆ, 3 ತಾಲೂಕುಗಳಲ್ಲಿ ಪ್ರಾಯೋಗಿಕ ಆರಂಭ
* 1568 ಜನವಸತಿ ಪ್ರದೇಶ ಕಂದಾಯ ಗ್ರಾಮವಾಗಿ ಘೋಷಣೆ
* ಮುಂದಿನ ವರ್ಷದಲ್ಲಿ 2500 ಗ್ರಾಮ ಪೋಡಿ ಮುಕ್ತ
* ಸಾಮಾಜಿಕ ಭದ್ರತಾ ಪಿಂಚಣಿ ಮಾಸಿಕ 500 ರೂ. ನಿಂದ 600 ರೂ. ಗೆ ಹೆಚ್ಚಳ
* ವೃದ್ಧಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ, ಮನಸ್ವಿನಿ ಹಾಗೂ ಮೈತ್ರಿ ಫಲಾನುಭವಿಗಳಿಗೆ ಅನ್ವಯ
* ರುದ್ರಭೂಮಿ ಖರೀದಿಗೆ 10 ಕೋಟಿ ರೂ.ಮೀಸಲು
* ಹವಾಮಾನ ಮುನ್ಸೂಚನೆ ಮುನ್ನೆಚರಿಕೆ ನೀಡಲು ಮೊಬೈಲ್ ಆ್ಯಪ್
* ಅರ್ಚಕರಿಗೆ ತಸ್ತಿಕ್ ನೀಡಲು ವಾರ್ಷಿಕ 20 ಕೋಟಿ ರೂ. ಅನುದಾನ
* ತಿರುಮಲದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಅತಿಥಿ ಗೃಹ